ವಾರ್ತಾ ಸಚಿವರ ಬೆಂಗಾಲು ವಾಹನಕ್ಕೆ ಅಘಪಾತ

ನಿತ್ಯವಾಣಿ, ಚಿತ್ರದುರ್ಗ, ಜೂನ್06: ಹಿರಿಯೂರು ತಾಲ್ಲೂಕಿನ ಗುಯಿಲಾಳು ಟೋಲ್ ಸಮೀಪದ ಅತಿಥ್ಯ ಹೋಟೆಲ್ ಹತ್ತಿರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಚಿವರಾದ ಸಿ.ಸಿ.ಪಾಟೀಲ್ ಅವರ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿಯಾಗಿರುವ ಘಟನೆ ಭಾನುವಾರ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿರುವಾಗ ಮಾರ್ಗಮಧ್ಯೆ ಹಿರಿಯೂರು ತಾಲ್ಲೂಕಿನ ಗುಯಿಲಾಳು ಟೋಲ್ ಸಮೀಪದ ಅತಿಥ್ಯ ಹೋಟೆಲ್ ಹತ್ತಿರ ಸಚಿವರ ಬೆಂಗಾವಲು ವಾಹನಕ್ಕೆ ಲಾರಿ ಚಾಲಕನ ಅಜಾಗರೂಕತೆಯಿಂದ ಲಾರಿ ಅಡ್ಡ ಬಂದಿದ್ದು, ಈ ವೇಳೆ ಬೆಂಗಾವಲು ವಾಹನದ ಚಾಲಕನ ಸಮಯ ಪ್ರಜ್ಞೆಯಿಂದ ವಾಹನ ನಿಯಂತ್ರಿಸಲು ಸಾಧ್ಯವಾಗಿದ್ದು ವಾಹನದ ಬಾನೆಟ್ ಮಾತ್ರ ಜಖಂ ಆಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸಚಿವರ ಬೆಂಗಾವಲು ವಾಹನ ಅಪಘಾತವಾದ ಹಿನ್ನಲೆಯಲ್ಲಿ ಇನ್ನೊಂದು ಬೆಂಗಾವಲು ವಾಹನದ ವ್ಯವಸ್ಥೆ ಮಾಡಿ ಸಚಿವರನ್ನು ಕಳುಹಿಸಿಕೊಡಲಾಯಿತು. ಈ ಕುರಿತು ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.
======

Leave a Reply

Your email address will not be published.