ಚಿತ್ರದುರ್ಗ ಜಿಲ್ಲಾ ಆಡಳಿತದಿಂದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ರವರ 130 ನೇ ಜಯಂತಿ ಆಚರಣೆ

ಚಿತ್ರದುರ್ಗ,ನಿತ್ಯವಾಣಿ,(ಏ.14) : ಇಂದು ಡಾ: ಬಿ.ಆರ್.ಅಂಬೇಡ್ಕರ್ ರವರ 130 ನೇ ಜಯಂತಿ ಅಂಗವಾಗಿ  ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾ ಆಡಳಿತದಿಂದ ಜಿಲ್ಲಾಧಿಕಾರಿ ಕವಿತಾ ಮನ್ನಿಕೆರಿ ಮಾಲಾರ್ಪಣೆ ಮಾಡಿ  ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ   ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು,   ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಕೆ.  ನಂದಿನಿ, ಜಿಲ್ಲಾ ರಕ್ಷಣಾಧಿಕಾರಿ ಜಿ ರಾಧಿಕಾ, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್,  ಹಾಗೂ  ಇನ್ನಿತರು  ಭಾಗವಹಿಸಿದ್ದರು

Leave a Reply

Your email address will not be published.