ಕೊರೋನಾ ಕಫ್ರ್ಯೂಗೆ ಸಹಕಾರ ಕೊಡಿ : ರಾಜ್ಯದ ಜನತೆಯಲ್ಲಿ ಸಿಎಂ ಕೈಮುಗಿದು ಮನವಿ

ರಾಯಚೂರು,ಏ.11- ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡದಂತೆ ತಡೆಗಟ್ಟಲು ಅನಿವಾರ್ಯವಾಗಿ ಕೊರೊನಾ ಕಫ್ರ್ಯೂ ಜಾರಿ ಮಾಡಲಾಗಿದ್ದು, ಯಾರೊಬ್ಬರೂ ಉಲ್ಲಂಘನೆ ಮಾಡಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕೊರೊನಾ ಕಫ್ರ್ಯೂ ವಿಧಿಸಲಾಗಿದೆ. ಅನಗತ್ಯವಾಗಿ ಮನೆಯಿಂದ ಆಚೆ ಬರುವುದು, ತಿರುಗಾಡುವುದು ಸರಿಯಲ್ಲ. ಸಾರ್ವಜನಿಕರ ಸಹಕಾರ ಇಲ್ಲದಿದ್ದರೆ ಕೊರೊನಾ ಸೋಂಕು ತಡೆಗಟ್ಟುವುದಾದರೂ ಹೇಗೆ ಸಿಎಂ ಪ್ರಶ್ನಿಸಿದರು.

Leave a Reply

Your email address will not be published.