ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಆಘಾತಕಾರಿ ಘಟನೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಬೆಟ್ಟ ಹತ್ತುತ್ತಿದ್ದ ಭಕ್ತರನ್ನು ಬೆದರಿಸಿ ದರೋಡೆಗೆ ಯತ್ನಿಸಲಾಗಿದೆ.

ಕುಟುಂಬವೊಂದು ಅಲಿಪಿರಿಯಿಂದ ತಿರುಮಲ ಬೆಟ್ಟ ಹತ್ತುವಾಗ ಕಳ್ಳರ ಗುಂಪೊಂದು ಅವರನ್ನು ಅಡ್ಡಗಟ್ಟಿ ದರೋಡೆಗೆ ಯತ್ನಿಸಿದೆ. ಭಾನುವಾರ ತಡರಾತ್ರಿ ಕರ್ನೂಲ್ ಮೂಲದ ಸುನಿಲ್ ಅವರ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ತಿರುಮಲ ಬೆಟ್ಟ ಹತ್ತುತ್ತಿದ್ದರು. ತಿರುಮಲ ತಲುಪಲು 2830 ಮೆಟ್ಟಿಲು ದೂರ ಇರುವಾಗ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕುತ್ತಿಗೆಯಲ್ಲಿದ್ದ ಚಿನ್ನದ ಸರ ದೋಚಲು ಯತ್ನಿಸಿದ್ದಾರೆ. ಈ ವೇಳೆ ಸಹಾಯವಾಣಿ ಸಂಖ್ಯೆ 100 ಕ್ಕೆ ಕರೆ ಮಾಡಿದ ಕುಟುಂಬದವರು ಪಾರಾಗಿದ್ದಾರೆ ಎಂದು ಹೇಳಲಾಗಿದೆ.

Leave a Reply

Your email address will not be published.